ಬೆಂಗಳೂರು: ದೇವಾಲಯಕ್ಕೆ ನುಗ್ಗಿ ಕಳವು

Update: 2021-12-08 16:04 GMT

ಬೆಂಗಳೂರು, ಡಿ.8: ಇಲ್ಲಿನ ಶನೇಶ್ವರ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರರೂ.ಗಳ ಹಣ ಸಂಗ್ರಹವಾಗಿದ್ದ ಹುಂಡಿಯನ್ನು ಹೊತ್ತೊಯ್ದ ಘಟನೆ ಹೆಬ್ಬಾಳದ ಚೋಳನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. 

ಚೋಳನಾಯಕನಹಳ್ಳಿಯ ಶಂಭುಲಿಂಗೇಶ್ವರ ಹಾಗೂ ಶನೇಶ್ವರ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ನುಗ್ಗಿದ ಇಬ್ಬರು ದೇವಾಲಯದ ಹುಂಡಿ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಕಳೆದ ಒಂದು ವರ್ಷದಿಂದ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಈ ಬಗ್ಗೆ ತಿಳಿದವರೇ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು ಕಳ್ಳತನದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಹೆಬ್ಬಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News