ಹಾಸನ: ಮಗಳ ಸಾವಿನಿಂದ ಮನ ನೊಂದು ಅಳಿಯನ ಮನೆ ಮುಂದೆ ಆತ್ಮಹತ್ಯೆಗೈದ ತಂದೆ

Update: 2021-12-09 11:56 GMT

ಹಾಸನ: ಮಗಳ ಸಾವಿನಿಂದ ಮನನೊಂದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. 

ಮಗಳ ಪತಿಯ ಮನೆ ಮುಂದೆಯೇ ನಾಗರಾಜ್ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ.

ಮಗಳ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಮಗಳು ಗರ್ಭಿಣಿಯಾದ ವೇಳೆ ಮಗಳ ಗರ್ಭಪಾತಕ್ಕೆ ಯತ್ನಿಸಲಾಗಿದೆ ಎಂದು ಮೃತ ನಾಗರಾಜ್ ಕುಟುಂಬ ಆರೋಪಿಸಿದೆ. ಮಗಳಿಗೆ ಕಿರುಕುಳ ನೀಡಿದ್ದರಿಂದ ಆಕೆ ಹೆರಿಗೆ ವೇಳೆಯಲ್ಲಿ ಮೃತಪಟ್ಟಿದ್ದಾಳೆ ಎಂದು ದೂರು ನೀಡಲಾಗಿದೆ.

ತೀವ್ರವಾಗಿ ನೊಂದ ತಂದೆಗೆ ಆತ್ಮಹತ್ಯೆ ನಿರ್ಧಾರ 

ಮಗಳ ಸಾವಿನಿಂದ ಮೊದಲೆ ಮಾನಸಿಕವಾಗಿ ದುಃಖಿತನಾಗಿದ್ದ ತಂದೆ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡು ತಾನು ತಂದಿದ್ದ ಪೂಜಾ ಸಾಮಗ್ರಿಗಳನ್ನು, ತಿಂಡಿ ತಿನಿಸುಗಳನ್ನು ಮನೆ ಬಾಗಿಲಿಗೆ ಇಟ್ಟು ಪೂಜೆ ಸಲ್ಲಿಸಿ ನಂತರ ತನ್ನ ಮೊಬೈಲ್ ನಲ್ಲಿ ತನ್ನ ಮಗಳಿಗಾದ ನೋವನ್ನು ಪೋನ್ ನಲ್ಲಿ ವೀಡಿಯೋ ರೆಕಾರ್ಡ್ ಮಾಡಿ ನನ್ನ ಮಗಳ ಸಾವಿಗೆ ನೇರ ಕಾರಣರಾದ ಅವರ ಅತ್ತೆ ಭದ್ರಮ್ಮ ಹಾಗೂ ಅವರ ಗಂಡ ಪ್ರವೀಣ್ ಹಾಗೂ ಆಂದಲೆ ಸೊಮಣ್ಣ ನೇರ ಕಾರಣ ಎಂದು ಬೇಸರ ವ್ಯಕ್ತಪಡಿಸಿ ನನಗೆ ಬಂದಿರುವ ಸ್ಥಿತಿ ಬೇರೆ ಯಾವ ತಂದೆ ತಾಯಿಗೂ ಬರಬಾರದು ತಪ್ಪಿತಸ್ಥರನ್ನು ಸಾಯುವವರೆಗೂ ಜೈಲಿನಲ್ಲಿ ಇಡಬೇಕು ಎಂದು ಪೋಲಿಸರಲ್ಲಿ ಮನವಿ ಮಾಡಿ ಅಳಿಯನ ಮನೆ ಮುಂದೆ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಸಿಪಿಐ ಶ್ರೀಕಾಂತ್, ಅರೇ ಹಳ್ಳಿ ಸುರೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News