ಬಲವಂತದ ಮತಾಂತರ ಆರೋಪ: ಕೋಲಾರದ ಶ್ರೀನಿವಾಸಪುರದಲ್ಲಿ ಕ್ರೈಸ್ತರ ಪ್ರಾರ್ಥನೆ ನಡೆಯುತ್ತಿದ್ದ ಮನೆಯಲ್ಲಿ ದಾಂಧಲೆ
Update: 2021-12-12 13:07 GMT
ಕೋಲಾರ: ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಬಲಬಂತದ ಮತಾಂತರ ಆರೋಪದಲ್ಲಿ ನಾಲ್ವರು ಕ್ರಿಶ್ಚಿಯನ್ ಧರ್ಮ ಪ್ರಚಾರಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಶ್ರೀನಿವಾಸಪುರ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿನ ಬೇಬಮ್ಮ ಎನ್ನುವರ ಮನೆಯಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ಪುಸ್ತಕ ಹಾಗು ಬಿತ್ತಿ ಪತ್ರಗಳನ್ನ ರಸ್ತೆಗೆ ಹಾಕಿ ಬೆಂಕಿ ಹಚ್ಚಿದ್ದಾರೆ.
ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ನಾಲ್ವರು ಹಾಗೂ ಒಂದು ವಾಹನವನ್ನು ವಶಕ್ಕೆ ಪಡೆದಿದ್ದಾರೆ.