'ಲವ್ ಜಿಹಾದ್' ನಿಷೇಧ ಕಾಯ್ದೆ ಬರಲಿದೆ: ಸಚಿವ ಸುನೀಲ್ ಕುಮಾರ್

Update: 2021-12-13 11:54 GMT

ಬೆಳಗಾವಿ, ಸುವರ್ಣವಿಧಾನಸೌಧ, ಡಿ.13: ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.

ಸೋಮವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯೂ ಜಾರಿಗೊಳಿಸುತ್ತೇವೆ ಎಂದರು.

ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದಾಗಿ ಪ್ರಕಟಿಸಿತ್ತು. ಸದ್ಯಕ್ಕೆ ಈಗ ಮತಾಂತರ ನಿμÉೀಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದ ಅವರು, ಮತಾಂತರವನ್ನು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ ಕೂಡ ವಿರೋಧಿಸಿದ್ದರು ಎಂದು ನುಡಿದರು.

ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಕಾರಣವೇನು ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.

ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ಜಾರಿಗೊಳಿಸುತ್ತಿಲ್ಲ. ಬದಲಾಗಿ, ಈ ಬಗ್ಗೆ ಚರ್ಚೆಗೆ ಬಂದರೆ, ನಾವು ಸಿದ್ಧವಿದ್ದೇವೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News