ಹನೂರು: ಸಾರಿಗೆ ಬಸ್​​- ಕಾರು ನಡುವೆ ಢಿಕ್ಕಿ; ಓರ್ವ ಗಂಭೀರ

Update: 2021-12-13 15:00 GMT

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಿಂದ ಹಿಂತಿರುಗುತ್ತಿದ್ದ ಕಾರು ಸಾರಿಗೆ ಸಂಸ್ಥೆ ಬಸ್​​ಗೆ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಎಲ್ಲೆಮಾಳ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಚಂದು(24) ಗಂಭೀರವಾಗಿ ಗಾಯಗೊಂಡ ಚಾಲಕ. ನಾಲ್ವರು ಸ್ನೇಹಿತರು ಭಾನುವಾರ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಇಂದು ಹಿಂದಿರುಗುವಾಗ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ನ ಮಧ್ಯ ಭಾಗಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ.

ಸದ್ಯ, ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News