×
Ad

ಡಿ.16-17ರಂದು ಬ್ಯಾಂಕ್ ಮುಷ್ಕರ

Update: 2021-12-15 19:22 IST

ಉಡುಪಿ, ಡಿ.15: ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕಿನ ಅಧಿಕಾರಿಗಳು ಹಾಗೂ ನೌಕರರು ದೇಶದಾದ್ಯಂತ ಡಿ.16 ಮತ್ತು 17 ರಂದು ಎರಡು ದಿನಗಳ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ.

ಈ ಪ್ರಯುಕ್ತ ಉಡುಪಿ ಕೆನರಾ ಬ್ಯಾಂಕ್ ಕೋರ್ಟ್ ರೋಡ್ ಶಾಖೆಯ ಬಳಿ ಡಿ.16ರಂದು ಬೆಳಗ್ಗೆ 10ಗಂಟೆಗೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆಯ ಸಂಚಾಲಕ ಹೆರಾಲ್ಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News