ನದಿಗೆ ತಳ್ಳಿ ಪತ್ನಿಯ ಕೊಲೆ: ಆರೋಪಿಯ ಬಂಧನ

Update: 2021-12-16 05:29 GMT

ಮೈಸೂರು,ಡಿ.15: ದೇವಸ್ಥಾನಕ್ಕೆ ಕರೆದು ಕೊಂಡು ಬಂದಿದ್ದ ಪತಿ, ಕಪಿಲಾ ನದಿಗೆ ಪತ್ನಿಯನ್ನು ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ  ನಂಜನಗೂಡು ಪೊಲೀಸರು ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮುದ್ದಹಳ್ಳಿ ಗ್ರಾಮದ ರಾಜೇಶ್ ಕೊಲೆ ಮಾಡಿದ ಆರೋಪಿ(ಪತಿ)ಯಾಗಿದ್ದು, ನದಿಯಲ್ಲಿ ಮುಳುಗಿಸಿ ಸಾಯಿಸಲು ಮುಂದಾದ ವೇಳೆ ಮೀನುಗಾರರು ತಡೆದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಗ್ರಾಮದಿಂದ ನಂಜನಗೂಡು ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ ಗೆ ಆರೋಪಿ ರಾಜೇಶ್, ಪತ್ನಿ ದೇವಿ ಮತ್ತು ಮಕ್ಕಳು ಆಗಮಿಸಿದ್ದರು.

ಈ ವೇಳೆ ದೇವಾಲಯಕ್ಕೆ ಹೋಗೋಣ ಬಾ ಎಂದು ಕರೆದೊಯ್ದು, ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಪಿಲಾ ನದಿಗೆ ತಳ್ಳಿ ಕೊಲೆಗೈದಿದ್ದಾನೆ ಎನ್ನಲಾಗಿದೆ. 

 ಘಟನೆ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News