ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ ನಿಧನ

Update: 2021-12-15 16:30 GMT
ನೇಮಿಚಂದ್ರ

ಬೆಂಗಳೂರು, ಡಿ.15: ಹಲವು ಜನಪರ ಚಳವಳಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ನೇಮಿಚಂದ್ರ (27) ಅವರು ಬುಧವಾರ ಬೆಳಗಾವಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನೇಮಿಚಂದ್ರ ಅವರು ಬೆಳಗಾವಿ ಮೂಲದವರಾಗಿದ್ದು, ಕೆಲ ವರ್ಷಗಳಿಂದ ನ್ಯುಮೊನಿಯಾ ಮೊದಲಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಅವರು ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಗೌರಿ ಬಳಗ ಮೊದಲಾದ ಪ್ರಗತಿಪರ ಸಂಘಟನೆಗಳಲ್ಲಿ ಮತ್ತು ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಸಮ ಸಮಾಜದ ಕನಸು ಹೊತ್ತು ಜನ ಚಳವಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು.

ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News