ಕಾಸರಗೋಡು; ಅಕ್ರಮ ಮರಳುಗಾರಿಕೆ ಆರೋಪ: 10 ದೋಣಿಗಳ ವಶ

Update: 2021-12-16 05:18 GMT

ಕಾಸರಗೋಡು : ಕುಂಬಳೆ ಶಿರಿಯಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಡಿವೈಎಸ್ಪಿ  ಬಾಲಕೃಷ್ಣನ್ ನಾಯರ್  ನೇತೃತ್ವದ ತಂಡವು ಹತ್ತು ದೋಣಿಗಳನ್ನು ವಶಪಡಿಸಿಕೊಂಡಿದೆ.

ಅಕ್ರಮ ಮರಳುಗಾರಿಕೆ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News