ಹಾಸನ: ಲಾರಿ ಢಿಕ್ಕಿ; ಬೈಕ್ ನಲ್ಲಿದ್ದ ಅವಳಿಜವಳಿ ಮಕ್ಕಳು ಸಹಿತ ಮೂವರು ಮೃತ್ಯು

Update: 2021-12-20 10:20 GMT

ಹಾಸನ: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಹೋಗುತ್ತಿದ್ದ ಅವಳಿ ಜವಳಿ ಮಕ್ಕಳು ಸಹಿತ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ನಗರದ ಹೊರವಲಯದಲ್ಲಿ ರವಿವಾರ ರಾತ್ರಿ ನಡೆದಿದೆ.

ಗವೇನಹಳ್ಳಿ ಶಿವಾನಂದ್ ಬೈಕ್ ಚಲಾಯಿಸುತ್ತಿದ್ದು, ಅವರು ಗಂಭೀರ ಗಾಯಗೊಂಡಿದ್ದಾರೆ, ಪತ್ನಿ ಜ್ಯೋತಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಹಾಗು ಅವಳಿ ಜವಳಿ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲಾರಿ ಚಾಲಕ ಮದ್ಯ ಸೇವನೆ ಮಾಡಿ ಅತಿ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಮುಖ್ಯ ಕಾರಣ. ಇನ್ನು ಬೈಪಾಸ್ ರಸ್ತೆ ಕೂಡ ಅಗಲೀಕರಣವಾಗಬೇಕಾಗಿದೆ. ನಗರದ ಒಳಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಬಗ್ಗೆ ಪರಿಶೀಲಿಸುವ ಪೊಲೀಸರು, ಬೈಪಾಸ್ ಸ್ಥಳಗಳಲ್ಲೂ ಮದ್ಯ ಸೇವನೆ ಮಾಡಿ ವಾಹನ ಓಡಿಸುವ ಬಗ್ಗೆ ಪೊಲೀಸರು ಪರಿಶೀಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News