×
Ad

ಜ.9ರಿಂದ 19ರವರೆಗೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ: ಡಿ.ಕೆ.ಶಿವಕುಮಾರ್

Update: 2021-12-21 18:30 IST

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.21: ಮೇಕೆದಾಟು ಅಣೆಕಟ್ಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 2022ರ ಜ.9 ರಿಂದ ಜ.19 ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜ.9 ರಂದು ಬೆಳಗ್ಗೆ 9.30ಕ್ಕೆ ಮೇಕೆದಾಟಿನಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಗಳವಾರ ಸುವರ್ಣ ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾದಯಾತ್ರೆಯೂ ಅಲ್ಲಿಂದ ಸುಮಾರು 75 ಕಿ.ಮೀ ದೂರದ ಕೆಂಗೇರಿಯ ನಗರ ಪ್ರದೇಶಕ್ಕೆ ಬರುವುದಕ್ಕೆ ಐದು ದಿನಗಳ ಕಾಲಾವಕಾಶ ಬೇಕು. ಹೀಗಾಗಿ ಐದು ದಿನ ಗ್ರಾಮೀಣ ಭಾಗದಲ್ಲಿ ಹಾಗೂ ಐದು ದಿನ ನಗರ ಭಾಗದಲ್ಲಿ ಪಾದಯಾತ್ರೆ ನಡೆಯಲಿದೆ ಎಂದರು.

ಕಾಂಗ್ರೆಸ್ ಸರಕಾರದಲ್ಲಿ ಎಂ.ಬಿ.ಪಾಟೀಲ್ ನೀರಾವರಿ ಸಚಿವರಾಗಿದ್ದಾಗ ಈ ಯೋಜನೆಯ ರೂಪುರೇμÉ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದರು. ನಾನು ನೀರಾವರಿ ಸಚಿವನಾಗಿದ್ದಾಗ ಅದಕ್ಕೆ ಅನುಮತಿ ನೀಡಿದ್ದೆ. ಇದು ಸಮತೋಲಿತ ನೀರಾವರಿ ಯೋಜನೆ. ಇದರಿಂದ ರೈತರು ಹಾಗೂ ಬೆಂಗಳೂರು ಜನರ ಕುಡಿಯುವ ನೀರಿಗೆ ಹಾಗೂ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಯೋಜನೆಗೂ ನೆರವಾಗುತ್ತದೆ ಎಂದು ಅವರು ಹೇಳಿದರು.

ಈ ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ಪಕ್ಷ ವಹಿಸಿಕೊಂಡಿದ್ದರೂ ಇದು ಪಕ್ಷಾತೀತ ಹೋರಾಟ. ಎಲ್ಲ ವರ್ಗ, ಸಮುದಾಯಕ್ಕೆ ಸಂಬಂಧಿಸಿದ ಹೋರಾಟ ಇದಾಗಿದೆ. ಕೈಗಾರಿಕೆಯವರಿಂದ ಹಿಡಿದು ರೈತರು, ಕಾರ್ಮಿಕರು, ಕಲಾವಿದರು ಸೇರಿದಂತೆ ಎಲ್ಲರೂ ಈ ಹೋರಾಟದಲ್ಲಿ ಭಾಗವಹಿಸಬಹುದು ಎಂದು ಶಿವಕುಮಾರ್ ಕರೆ ನೀಡಿದರು.

ಒಂದು ಕಾಲದಲ್ಲಿ ಈ ಯೋಜನೆಗೆ ನಾವು ಕೂಡ ಹಣ ನೀಡುತ್ತೇವೆ ಎಂದು ತಮಿಳುನಾಡಿನವರು ನ್ಯಾಯ ಆಡಿದ್ದರು. ನಮ್ಮ ಹಣದಲ್ಲೇ ನಾವು ಯೋಜನೆ ಮಾಡುತ್ತೇವೆ. ಮೇಕೆದಾಟು ಯೋಜನೆಯಿಂದ 2.17 ರೂ.ಗೆ ಒಂದು ಯುನಿಟ್ ವಿದ್ಯುತ್ ಉತ್ಪಾದನೆಯಾಗುತ್ತದೆ. ಇದಕ್ಕೆ ಹಾಕುವ ಬಂಡವಾಳ ಉತ್ಪಾದನೆಯಾಗುವ ವಿದ್ಯುತ್‍ನಿಂದಲೇ ವಾಪಸ್ ಬರುತ್ತದೆ. ಇನ್ನು ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದು ಶಿವಕುಮಾರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News