ಕಾಸರಗೋಡು : ಲಾರಿ ಕಂದಕಕ್ಕೆ ಉರುಳಿ ಬಿದ್ದು ಮೂವರು ಮೃತ್ಯು

Update: 2021-12-23 13:35 GMT

ಕಾಸರಗೋಡು : ಲಾರಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪಾಣತ್ತೂರು ಸಮೀಪ ಗುರುವಾರ ಸಂಜೆ ನಡೆದಿದೆ.

ಮೃತರನ್ನು ಮೋಹನ್, ನಾರಾಯಣ ಮತ್ತು ಬಾಬು ಎಂದು ಗುರುತಿಸಲಾಗಿದೆ.

ರಾಜಪುರ ಪಾಣತ್ತೂರು ಪರಿಯಾರ ಎಂಬಲ್ಲಿ ಘಟನೆ ನಡೆದಿದೆ. ಮರ ಹೇರಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದ್ದು, ಈ ಸಂದರ್ಭ ಗಂಭೀರ ಗಾಯಗೊಂಡ ಮೂವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು  ರಕ್ಷಣಾ ಕಾರ್ಯ ನಡೆಸಿದ್ದು, ಕಾಞ೦ಗಾಡ್ ಕಂದಾಯ ಅಧಿಕಾರಿ ಡಿ.ಆರ್. ಮೇಘಶ್ರೀ ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News