ಕರಾವಳಿಯಲ್ಲಿ ಕ್ರಿಸ್‌ಮಸ್ ಹಬ್ಬದ ಸಂಭ್ರಮ

Update: 2021-12-25 05:37 GMT

ಮಂಗಳೂರು, ಡಿ.24: ಕರಾವಳಿಯಲ್ಲಿ ಕ್ರೈಸ್ತರು ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಒಮೈಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಚರ್ಚ್‌ಗಳಲ್ಲಿ ಶನಿವಾರ ರಾತ್ರಿಯಿಂದಲೇ ಧಾರ್ಮಿಕ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ.

ಹಬ್ಬದ ಪ್ರಯುಕ್ತ ಶುಕ್ರವಾರ ರಾತ್ರಿ ಬಲಿಪೂಜೆ ನಡೆದಿದ್ದು, ಶನಿವಾರ ಬೆಳಗ್ಗೆಯೂ ವಿಶೇಷ ಬಲಿಪೂಜೆ ನೆರವೇರಿತು. ನಗರದ ರೊಸಾರಿಯೋ ಚರ್ಚನಲ್ಲಿ ಮಂಗಳೂರು ಬಿಷಪ್ ಅ.ವಂ. ಡಾ.ಪೀಟರ್ ಪಾವ್ಲ್ ಸಲ್ಡಾನ ವಿಶೇಷ ಬಲಿಪೂಜೆ ನೆರವೇರಿಸಿ ಹಬ್ಬದ ಸಂದೇಶ ನೀಡಿದರು. ಅದೇರೀತಿ ದ.ಕ. ಜಿಲ್ಲೆಯ ವಿವಿಧ ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News