×
Ad

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ-ಸ್ವಚ್ಛತಾ ಕಾರ್ಯಕ್ರಮ

Update: 2021-12-26 19:47 IST

ಮಂಗಳೂರು, ಡಿ.26: ದ.ಕ. ಜಿಲ್ಲಾಡಳಿತ, ದ.ಕ.ಜಿಪಂ, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಚತಾ ಕಾರ್ಯಕ್ರಮವು ರವಿವಾರ ಪಣಂಬೂರು ಬೀಚ್‌ನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕರಾವಳಿ ಜಿಲ್ಲೆಯ ಸೌಂದರ್ಯಕ್ಕೆ ಪ್ರವಾಸಿ ಕ್ಷೇತ್ರಗಳು ಕನ್ನಡಿಯಂತಿದೆ. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಸ್ವಚ್ಛವಾಗಿರುವುದರ ಜೊತೆಗೆ ಕಡಲ ತೀರವನ್ನು ಸ್ವಚ್ಛವಾಗಿರಿಸಬೇಕಾದ ಅಗತ್ಯವಿದೆ ಎಂದರು.

ಅತಿಥಿಯಾಗಿ ಶಾಸಕ ಡಾ.ಭರತ್ ಶೆಟ್ಟಿ ಪಾಲ್ಗೊಂಡಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಪಂ ಸಿಇಒ ಡಾ.ಕುಮಾರ್, ನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕ್ರೆಡೈ ಮಂಗಳೂರು ಅಧ್ಯಕ್ಷ ಪುಷ್ಪರಾಜ ಜೈನ್, ಕೆಐಒಸಿಎಲ್ ಜನರಲ್ ಮ್ಯಾನೇಜರ್ ರಾಮಕೃಷ್ಣ ರಾವ್ ಹೆಚ್, ಸೀನಿಯರ್ ಮ್ಯಾನೇಜರ್ ಮುರುಗೇಶ್, ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ, ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್, ಯತೀಶ್ ಬೈಕಂಪಾಡಿ, ಯಂಗ್ ಸ್ಟಾರ್ ಪಣಂಬೂರು ಅಧ್ಯಕ್ಷ ನವೀನ್ ಸಾಲಿಯಾನ್, ಸಂತೋಷ್ ಗುರಿಕಾರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News