ಡಿಕೆಶಿ ವೇಗ ತಡೆದುಕೊಳ್ಳಲು ಸಿದ್ದರಾಮಯ್ಯಗೆ ಆಗುತ್ತಿಲ್ಲ: ಬಿಜೆಪಿ ಟೀಕೆ

Update: 2021-12-27 12:37 GMT

ಬೆಂಗಳೂರು, ಡಿ. 27: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವೇಗವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಬಿಜೆಪಿ ಟೀಕಿಸಿದೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಅವರು ತಾನು ಸಿಎಂ ಆಗುವ ಕನಸಿಗೆ ಪೂರಕವಾಗಿ ತಮ್ಮ ನಿಷ್ಠಾವಂತರ ಪಡೆ ಕಟ್ಟುತ್ತಿದ್ದಾರೆ. ಇದು ತನಗೆ ಮಗ್ಗುಲ ಮುಳ್ಳಾಗಬಹುದು ಎಂಬ ಭಯದಿಂದ ಸಿದ್ದರಾಮಯ್ಯ ತನ್ನ ಆಪ್ತರ ಮೂಲಕ ಡಿಕೆಶಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಗೆಲ್ಲುವವರ್ಯಾರು? ಎಂದು ಪ್ರಶ್ನಿಸಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಹಿಂದಿನದ್ದಕಿಂತ ಕೆಲವು ಸ್ಥಾನ ಕಳೆದುಕೊಂಡರೂ ರಾಜ್ಯವನ್ನೇ ಗೆದ್ದ ಸಂಭ್ರಮ ತೋರಿಸಿದ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಈಗ ಅಯೋಮಯವಾಗಿದೆ. ಎರಡು ಪವರ್ ಸೆಂಟರ್ ವಿರುದ್ಧ ದಿಕ್ಕಿಗೆ ಮುಖ ಮಾಡಿ ನಿಂತಿದೆ. ನಾಯಕತ್ವದ ಕುರಿತು ಶೀತಲ ಸಮರ ಆರಂಭವಾಗಿದೆ. ಕನಕಪುರ ಬಂಡೆ ಪುಡಿಯಾಗುವುದು ನಿಶ್ಚಿತವೇ?' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News