ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕರಣ ದಾಖಲು

Update: 2021-12-27 15:02 GMT

ಬೆಂಗಳೂರು, ಡಿ.27: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಗರ ದಕ್ಷಿಣ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ಧಪ್ಪ ಗಾರ್ಡನ್ ನಿವಾಸಿ ಲಕ್ಷ್ಮೀನಾರಾಯಣ್ ಎಂಬುವರು ನೀಡಿದ ದೂರಿನ ಅನ್ವಯ ಸಂಬರಗಿ ವಿರುದ್ಧ ಪ್ರಕರಣ ದಾಖಲಾಗಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಕ್ರೈಸ್ತ ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದ್ದಾರೆ. ಜತೆಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತಂತೆ ಆಕ್ಷೇಪಾರ್ಹ ರೀತಿಯಲ್ಲಿ ತೇಜೋವಧೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News