ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆ
ಮಂಗಳೂರು, ಡಿ.28: ಬೆಂಗರೆ-ತಣ್ಣೀರುಬಾವಿಯಲ್ಲಿರುವ ಪ್ರವಾಸೋದ್ಯಮ ತಾಣ ಟ್ರೀ ಪಾರ್ಕ್ನಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ಸೂಚಿಸಿದರು.
ಅರಣ್ಯ ಇಲಾಖೆಯ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ತಣ್ಣೀರುಬಾವಿ ಟ್ರೀ ಪಾರ್ಕ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಟ್ರೀ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿದ ಅವರು ತಣ್ಣೀರುಬಾ ಟ್ರೀ ಪಾರ್ಕ್ನಲ್ಲಿ ಚಾಲ್ತಿಯಲ್ಲಿರುವ ಪ್ರವೇಶ ಶುಲ್ಕ ಹಾಗೂ ಪಾರ್ಕ್ನೊಳಗೆ ಚಲನಚಿತ್ರಗಳ ಚಿತ್ರೀಕರಣದ ಶುಲ್ಕವನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಡಾ.ದಿನೇಶ್ ಕುಮಾರ್ ಹೇಳಿದರು.
ಟ್ರೀ ಪಾರ್ಕ್ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ಕ್ಯಾಂಟೀನ್, ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯುಕ್ತಿಗೊಳಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶನ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಎಸ್ ಮಾಣಿಕ್ಯ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಪ್ರವೀಣ್, ಮಂಗಳೂರು ವಿವಿಯ ಪ್ರೊ.ನಾಯ್ಕೊ ಮತ್ತಿತರರು ಉಪಸ್ಥಿತರಿದ್ದರು.