ಎಲ್ಲದಕ್ಕೂ ಬಂದ್‌ ಅಂತಿಮ ನಿರ್ಧಾರವಲ್ಲ, ಕರ್ನಾಟಕ ಬಂದ್ ಕೈಬಿಡಿ: ಸಿಎಂ ಬೊಮ್ಮಾಯಿ ಮನವಿ

Update: 2021-12-29 11:31 GMT

ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋರಾಟಗಾರರಿಗೆ ಮನವಿ ಮಾಡಿದ್ದಾರೆ. 

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಎಲ್ಲದಕ್ಕೂ ಬಂದ್‌ ಅಂತಿಮ ನಿರ್ಧಾರವಲ್ಲ, ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಜನರು ಸಂಕಷ್ಟದಲ್ಲಿದ್ದು, ಬಂದ್‌ ನಡೆಸುವುದು ಬೇಡ ಎಂದು ಹೇಳಿದರು. 

ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ. ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಆಚರಣೆಯನ್ನು ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಡಿ.31ರಂದು ಯಾರಾದರೂ ಬಲವಂತವಾಗಿ ಬಂದ್ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು 

- ಆರಗ ಜ್ಞಾನೇಂದ್ರ, ಗೃಹ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News