×
Ad

​ಹೊಸ ವರ್ಷದ ತುರ್ತು ಪ್ರತಿಸ್ಪಂದನಕ್ಕಾಗಿ ಆರೋಗ್ಯ ಕವಚ 108

Update: 2021-12-30 21:42 IST

ಉಡುಪಿ, ಡಿ.30: ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿಯನ್ನು ತಡೆಯುವ ದೃಷ್ಟಿ ಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟ ರಾಜ್ಯಾದ್ಯಂತ ಸುಸಜ್ಜಿತಗೊಂಡಿದೆ.

ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳ ಸಂದರ್ಭದಲ್ಲಿ ಸರಾಸರಿ ಶೇ.30ರಿಂದ 35ರಷ್ಟು ಹೆಚ್ಚು ಅಪಘಾತ ಪ್ರಕರಣಗಳು ವರದಿ ಯಾಗುತ್ತವೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಹೊಂದಾಣಿಕೆಯನ್ನು ಹೊಂದಿರುತ್ತದೆ.

ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಹಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಆಂಬುಲೆನ್ಸ್ನಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಿಸಲಾಗಿದೆ.

ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸ ಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಉಚಿತ ಸಂಖ್ಯೆಗೆ ಡಯಲ್ ಮಾಡ ಬಹುದು ಎಂದು ಜಿಲ್ಲಾ ವ್ಯವಸ್ಥಾಪಕರಾದ ಮಹಾಬಲ ತಿಳಿಸಿದ್ದಾರೆ.

ಜೀವನ್ಮರಣದ ಗಾಯಗಳಿಂದ ನರಳುತ್ತಿರುವ ಗಾಯಳುಗಳನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಗಳು ಆಸ್ಪತ್ರೆಗೆ ದಾಖಲಿಸುತ್ತವೆ. ಹೆಚ್ಚಿನ ಸಂಖ್ಯೆ ಸಾವು-ನೋವುಗಳು ಇದ್ದಲ್ಲಿ ಅನಾಹುತಗಳಿದ್ದಲ್ಲಿ ಮಾಹಿತಿಯನ್ನು ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನವರನ್ನು ಸಂಪರ್ಕಿಸಬಹುದು.
ಮಹಾಬಲ, ಜಿಲ್ಲಾ ವ್ಯವಸ್ಥಾಪಕರು, ಜಿವಿಕೆ ಇಎಂಆರ್‌ಐ 108, ಮೊಬೈಲ್ ಸಂಖ್ಯೆ: 7022099108.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News