ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಸರಣಿ: ಟೀಮ್ ಇಂಡಿಯಾಕ್ಕೆ ರಾಹುಲ್ ನಾಯಕ

Update: 2021-12-31 16:56 GMT

ಹೊಸದಿಲ್ಲಿ, ಡಿ.31: ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಕೆ.ಎಲ್. ರಾಹುಲ್ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

3 ಪಂದ್ಯಗಳ ಏಕದಿನ ಸರಣಿಗೆ ವೇಗದ ಬೌಲರ್ ಜಸ್ ಪ್ರೀತ್ ಬುಮ್ರಾರನ್ನು ಉಪ ನಾಯಕನಾಗಿ ನೇಮಿಸಲಾಗಿದೆ.

ರೋಹಿತ್ ಸ್ನಾಯು ಸೆಳೆತದಿಂದ ಚೇತರಿಸಿಕೊಳ್ಳುತ್ತಿದ್ದು  ವಿಶ್ವಕಪ್ ಗೆ ಶೇ.100ರಷ್ಟು ಫಿಟ್ ಆಗಿರುವ ಅಗತ್ಯವಿದೆ. ಎಲ್ಲ ಆಯ್ಕೆಗಾರರು ರೋಹಿತ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಆಯ್ಕೆ ಸಮಿತಿಯ  ಅಧ್ಯಕ್ಷ ಚೇತನ್ ಶರ್ಮಾ ಹೇಳಿದ್ದಾರೆ.

ಭಾರತ ತಂಡ: ಕೆ.ಎಲ್.ರಾಹುಲ್(ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ,  ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್,ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಚಹಾಲ್, ಆರ್.ಅಶ್ವಿನ್, ಸುಂದರ್, ಜಸ್ ಪ್ರೀತ್ ಬುಮ್ರಾ(ಉಪ ನಾಯಕ), ದೀಪಕ್ ಚಹಾರ್, ಭುವನೇಶ್ವರ, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮುಹಮ್ಮದ್ ಸಿರಾಜ್.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News