ವೈಷ್ಣೋದೇವಿ ದೇಗುಲದ ಕಾಲ್ತುಳಿತಕ್ಕೆ ಯುವಕರ ನಡುವಿನ ಸಣ್ಣ ಜಗಳವೇ ಕಾರಣ: ಡಿಜಿಪಿ ದಿಲ್ಬಾಗ್ ಸಿಂಗ್

Update: 2022-01-01 07:16 GMT

ಶ್ರೀನಗರ: ಜಮ್ಮುವಿನ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಶನಿವಾರ ಬೆಳಗ್ಗಿನ ಜಾವ ಸಂಭವಿಸಿರುವ  ಕಾಲ್ತುಳಿತಕ್ಕೆ ಕೆಲವು ಯುವಕರ ನಡುವಿನ ಸಣ್ಣ ಜಗಳವೇ ಕಾರಣವಾಗಿದೆ. ದುರದೃಷ್ಟವಶಾತ್ ಕಾಲ್ತುಳಿತದ ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ಶನಿವಾರ ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು ಘಟನೆ ಅತ್ಯಂತ ದುರದೃಷ್ಟಕರ. ಪೊಲೀಸರು ಹಾಗೂ ಇತರ ಅಧಿಕಾರಿಗಳು ಸ್ವಲ್ಪ ಸಮಯದಲ್ಲೇ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನಾ ಸ್ಥಳದ ಪ್ರಾಥಮಿಕ ಮಾಹಿತಿ ಪ್ರಕಾರ ಕೆಲವು ಯುವಕರ ನಡುವೆ ವಾಗ್ವಾದ ನಡೆದಿದೆ ಹಾಗೂ ಕೆಲವೇ ಸೆಕೆಂಡ್ ನಲ್ಲಿ ನೂಕುನುಗ್ಗಲು ಉಂಟಾಗಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿದ್ದಾರೆ. ಕೂಡಲೇ ತಹಬಂದಿಗೆ ತರಲಾಗಿದೆ. ಆಹೊತ್ತಿಗಾಗಲೇ ಹಾನಿ ಸಂಭವಿಸಿತ್ತು ಎಂದು ಸಿಂಗ್  ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News