ಹೊಸ ವರ್ಷ ಆಚರಣೆ ಹಿನ್ನೆಲೆ: ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ; ಪೊಲೀಸ್ ಆಯುಕ್ತ ಪಂತ್

Update: 2022-01-01 18:08 GMT

ಬೆಂಗಳೂರು, ಜ.1: ಹೊಸ ವರ್ಷ ಆಚರಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. 

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸಹಕಾರದಿಂದ ಹೊಸ ವರ್ಷಾಚರಣೆ ಯಶಸ್ವಿಯಾಗಿದೆ. ತಮ್ಮ ತಮ್ಮ ಸ್ಥಳಗಳಲ್ಲೇ ವರ್ಷಾಚರಣೆ ನಡೆಸಿದ್ದಾರೆ. ಅದಕ್ಕಾಗಿ ನಾಗರಿಕರಿಗೆ ಧನ್ಯವಾದ ಹೇಳುವೆ ಎಂದು ನುಡಿದರು.

ನಗರದಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಳವಾಗಿವೆ. ಡ್ರಗ್ಸ್ ವಿರುದ್ಧದ ಸಮರ ನಿರಂತರವಾಗಿ ನಡೆಯುತ್ತದೆ. ಇದುವರೆಗೂ ಪೊಲೀಸರು ಉತ್ತಮ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಷ್ಟು ಕಾರ್ಯಾಚರಣೆ ಮುಂದುವರೆಸುತ್ತೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News