ಬಸ್ ಢಿಕ್ಕಿ: ಬೈಕ್ ಸಹಸವಾರನಿಗೆ ಗಾಯ

Update: 2022-01-03 16:53 GMT

ಉಪ್ಪಿನಂಗಡಿ: ಬೈಕ್‍ಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸಹ ಸವಾರ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಎಂಬಲ್ಲಿ ನಡೆದಿದೆ. 

34 ನೆಕ್ಕಿಲಾಡಿ ನಿವಾಸಿ ಶಾಂತಾರಾಮ ಶೆಣೈಯವರ ಮಗ ಶರಣ್ ಶೆಣೈ (15) ಗಾಯಗೊಂಡ ಬಾಲಕ. ಈತ ತನ್ನ ತಂದೆಯೊಂದಿಗೆ ಬೈಕ್‍ನಲ್ಲಿ ಸಂಚರಿಸುತ್ತಿದ್ದ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಬಸ್ಸೊಂದು ಇವರ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಈತನ ಕಾಲಿಗೆ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News