ಕೊಳ್ಳೇಗಾಲ: ಯುವಕ ಆತ್ಮಹತ್ಯೆ

Update: 2022-01-04 13:52 GMT

ಕೊಳ್ಳೇಗಾಲ. ಜ.4. ಯುವಕನೋರ್ವ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಕೊತ್ತನೂರು ಗ್ರಾಮದ ನಿವಾಸಿ ಸಿದ್ದರಾಜು ಎಂಬುವವರ ಮಗನಾದ ಯೋಗೇಶ್ (26) ಮೃತ್ತ ಯುವಕ ಎಂದು ಗುರುತಿಸಲಾಗಿದೆ.

ಮೃತ ಯುವಕ ಹಲವಾರು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಡ್ಯಾಂ ಬಳಿ ಬೈಕ್ ನಿಲ್ಲಿಸಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇಂದು ನೀರಿನಲ್ಲಿ ತೇಲಿ ಬಂದ ಮೃತದೇಹವನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಕೂಡಲೇ  ಸ್ಥಳಕ್ಕೆ ಆಗಮಿಸಿದ ಇಲ್ಲಿನ ಗ್ರಾಮಾಂತರ ಪೊಲೀಸರು  ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಪರೀಶಿಲಿಸಿದರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಸರ್ಕಾರಿ ವೈದ್ಯರಿಂದ ಅಲ್ಲಿಯೇ ಶವಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಶವವನ್ನು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News