×
Ad

ಬಿದಿರು ಕೃಷಿಗೆ ಸಹಾಯಧನ: ಅರ್ಜಿ ಆಹ್ವಾನ

Update: 2022-01-04 19:48 IST

ಉಡುಪಿ, ಜ.4: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ವರ್ಗದ ಜಮೀನು ಹೊಂದಿರುವ ರೈತರಿಗೆ ಬಿದಿರು ಕೃಷಿ ಮಾಡಲು, ಪ್ರತೀ ಎಕರೆಗೆ ಪ್ರತೀ ವರ್ಷ 18,000ರೂ.ನಂತೆ ಮೂರು ವರ್ಷಗಳ ಅವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820- 2574814 ಅನ್ನು ಸಂಪರ್ಕಿಸು ವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News