×
Ad

ಕಡಬ: ಟಿಪ್ಪರ್ ಢಿಕ್ಕಿ; ಬೈಕ್ ಸವಾರನಿಗೆ ಗಾಯ

Update: 2022-01-05 18:09 IST

ಕಡಬ : ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಬುಧವಾರ ನಡೆದಿದೆ‌‌.

ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದೆ‌. ಬೈಕ್ ಸವಾರ ಎಸೆಯಲ್ಪಟ್ಟಿದ್ದರಿಂದ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News