ರಾಷ್ಟ್ರಪತಿಯನ್ನು ಭೇಟಿಯಾಗಿ 'ಭದ್ರತಾ ಲೋಪ'ದ ಕುರಿತು ವಿವರಿಸಿದ ಪ್ರಧಾನಿ ಮೋದಿ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಬುಧವಾರ ತಮ್ಮ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪದ ಕುರಿತು ಮಾಹಿತಿ ನೀಡಿ ಈ ಗಂಭೀರ ವಿಚಾರದ ಕುರಿತು ಅವರ ಗಮನ ಸೆಳೆದಿದ್ದಾರೆ.
ರಾಷ್ಟ್ರಪತಿಗಳ ಸೆಕ್ರಟೇರಿಯಟ್ ಈ ಕುರಿತು ಟ್ವೀಟ್ ಮಾಡಿದೆ - "ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಪ್ರಧಾನಿ ನರೇಂದ್ರ ಮೋದಿಯ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಪಂಜಾಬ್ನಲ್ಲಿ ನಿನ್ನೆ ನಡೆದ ಭದ್ರತಾ ಲೋಪದ ಕುರಿತು ಮಾಹಿತಿ ಪಡೆದರು. ಈ ಗಂಭೀರ ಲೋಪದ ಕುರಿತು ರಾಷ್ಟ್ರಪತಿ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ."
ಇದಕ್ಕೂ ಮುಂಚೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಪ್ರಧಾನಿ ಜತೆ ಮಾತನಾಡಿ ಘಟನೆ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದರಲ್ಲದೆ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.
President Ram Nath Kovind met Prime Minister Narendra Modi at the Rashtrapati Bhavan today and received from him a first-hand account of the security breach in his convoy in Punjab yesterday. The President expressed his concerns about the serious lapse. pic.twitter.com/lzvAuriuGb
— President of India (@rashtrapatibhvn) January 6, 2022