ವೀಕೆಂಡ್ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ
Update: 2022-01-06 21:06 IST
ಮಂಗಳೂರು, ಜ. 6: ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿದೆ. ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಮದುವೆ ಹೊರತುಪಡಿಸಿ ಇತರ ಪೂರ್ವ ನಿಗದಿತ ಕುಟುಂಬದ ಕಾರ್ಯಕ್ರಮಗಳು 100 ಮಂದಿಗೆ ಸೀಮಿತಾಗಿಯೇ ಈ ವಾರದ ವೀಕೆಂಡ್ನಲ್ಲಿ ನಡೆಸಬೇಕು. ಈ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.
ಹರಕೆ ರೂಪದಲ್ಲಿ ಕುಟುಂಬದ ಕಾರ್ಯಕ್ರಮ 100 ಮಂದಿಗೆ ಮಾತ್ರ ಸೀಮಿತಗೊಳಿಸಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.