×
Ad

ಕೆಪಿಸಿಸಿ ಅಧ್ಯಕ್ಷರು ಪುಡಿ ರೌಡಿಯ ರೀತಿ ವರ್ತಿಸುತ್ತಿದ್ದಾರೆ: ಬಿಜೆಪಿ ಟೀಕೆ

Update: 2022-01-07 16:57 IST

ಬೆಂಗಳೂರು, ಜ. 7: `ಪಾದಯಾತ್ರೆಯನ್ನು ತಡೆಯಲು ರಾಜ್ಯ ಗೃಹ ಸಚಿವರು ಇನ್ನೊಂದು ಜನ್ಮ ಎತ್ತಿ ಬರಬೇಕು, ತಾಕತ್ತಿದ್ದರೆ ತಡೆಯಿರಿ ನೋಡೋಣ ಎಂಬ ಸವಾಲನ್ನು ಡಿ.ಕೆ.ಶಿವಕುಮಾರ್ ಹಾಕುತ್ತಿದ್ದಾರೆ. ಪುಡಿ ರೌಡಿಯ ರೀತಿ ಕೆಪಿಸಿಸಿ ಅಧ್ಯಕ್ಷರು ವರ್ತಿಸುತ್ತಿದ್ದಾರೆ. ಡಿಕೆಶಿಯವರೇ, ನೀವು ರೌಡಿ ಕೊತ್ವಾಲನ ಶಿಷ್ಯ ಎಂಬುದನ್ನು ತೋರಿಸಿಕೊಡುತ್ತಿದ್ದೀರಾ?' ಎಂದು ಬಿಜೆಪಿ ಟೀಕಿಸಿದೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, `ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷ, ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಹಾಗಾದರೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಬೇಕಿರುವುದು ಯಾರ ವಿರುದ್ಧ? ಡಿಕೆಶಿಯವರೇ, ಮೇಕೆದಾಟು ಈಗ ಸ್ಟ್ಯಾಲಿನ್ ಸರಕಾರದ ಅಂಗಳದಲ್ಲಿದೆ. ನೀವು ಸುಳ್ಳಿನಜಾತ್ರೆ ಮಾಡುವ ಬದಲು, ಅವರೊಂದಿಗೆ ಮಾತುಕತೆ ನಡೆಸಿ' ಎಂದು ಸಲಹೆ ನೀಡಿದೆ.

`ಮೇಕೆದಾಟು ಯೋಜನೆಗೆ ತಡೆ ಕೋರಿ ಯಾರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರೋ, ಆ ಸರಕಾರದೊಂದಿಗೆ ತಮಿಳುನಾಡಿನಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರ ಮೈತ್ರಿಯಲ್ಲಿದೆ. ಸೋನಿಯಾ ಗಾಂಧಿ ಕುಮ್ಮಕ್ಕಿನಿಂದ ತಮಿಳುನಾಡು ಸರಕಾರ ಮೇಕೆದಾಟು ಯೋಜನೆಯ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದೇ?' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

`ಜಂಟಿ ಪತ್ರಿಕಾಗೋಷ್ಠಿ ಮೂಲಕ ಸುಳ್ಳು ಪ್ರತಿಪಾದನೆಗೆ ಹೊರಟಿರುವ ಕಾಂಗ್ರೆಸ್ ಪಕ್ಷದ ಒಂಟಿ ಒಂಟಿ ನಾಯಕರೇ, ಹತ್ತಾರು ಪ್ರಶ್ನೆ ಎತ್ತುವ ಮುನ್ನ ನಮ್ಮ ಒಂದು ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು ಯಾರು? ಎಂದು ಬಿಜೆಪಿ, ಕಾಂಗ್ರೆಸ್ ಮುಖಂಡರು ಪ್ರಶ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News