ಸರೋಜಾದೇವಿ ದತ್ತಿ ಪ್ರಶಸ್ತಿಗೆ ಲೇಖಕಿ ನುಗ್ಗೇಹಳ್ಳಿ ಪಂಕಜ ಆಯ್ಕೆ

Update: 2022-01-08 14:06 GMT
ನುಗ್ಗೇಹಳ್ಳಿ ಪಂಕಜ

ಬೆಂಗಳುರು, ಜ.8: ಕನ್ನಡ ಸಾಹಿತ್ಯ ಪರಿಷತ್ ನೀಡುವ 2012ನೇ ಸಾಲಿನ ಡಾ.ಬಿ. ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕಿ ನುಗ್ಗೇಹಳ್ಳಿ ಪಂಕಜ ಆಯ್ಕೆಯಾಗಿದ್ದಾರೆ. 

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು 15 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News