ಜ.11ರಂದು ದ.ಕ. ಜಿಲ್ಲಾ ಜನತಾ ದಳ ಮುಸ್ಲಿಮ್ ಪ್ರತಿನಿಧಿಗಳ ಸಭೆ

Update: 2022-01-09 11:25 GMT

ಬಂಟ್ವಾಳ, ಜ.9: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾ ದಳದ ಮುಸ್ಲಿಮ್ ಪ್ರತಿನಿಧಿಗಳ ಸಭೆ ಜ.11ರಂದು ಅಪರಾಹ್ನ 3ಕ್ಕೆ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. 

ಇತ್ತೀಚೆಗಿನ ದಿನಗಳಲ್ಲಿ ದೇಶದಲ್ಲಿ ರಾಜಕೀಯ ಅಸಹಿಷ್ಣುತೆ ಹೆಚ್ಚುತ್ತಿದ್ದು ಕೆಲವು ಸಂಘಟನೆಗಳು ಕೋಮು ಪ್ರಚೋದಕ ಕೃತ್ಯ ಎಸಗುವ ಮೂಲಕ ಸಮಾಜದಲ್ಲಿ ಅಶಾಂತಿ ಹಾಗೂ ಅಭದ್ರತೆಯನ್ನು ಮೂಡಿಸುತ್ತಿದೆ. ಇದಕ್ಕೆ ಪ್ರಜಾಸತ್ತಾತ್ಮಕ ಹಾಗೂ ಕಾನೂನು ಚೌಕಟ್ಟಿನೊಳಗೆ ಪರಿಹಾರ ಕಂಡುಕೊಂಡು ಕೋಮು ಸೌಹಾರ್ದತೆಯನ್ನು ಕಾಪಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. 

ಸಭೆಯಲ್ಲಿ ದೇಶದ ಮುಸ್ಲಿಮರು ಎದುರಿಸುತ್ತಿರುವ ರಾಜಕೀಯ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲಾ ನಾಯಕರು ಭಾಗವಹಿಸಲಿದ್ದು ಜಾತ್ಯಾತೀತ ಜನತಾದಳದ ಮುಸ್ಲಿಮ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸ್ವಾಗತ ಸಮಿತಿ ಅಧ್ಯಕ್ಷ ಮುಹಮ್ಮದ್ ಶಫಿ, ಹಾರೂನ್ ರಶೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News