'ನಿಮ್ಮದು ಬೆಂಗಳೂರಿಗೆ ನೀರು ಕೊಡುವ ಯಾತ್ರೆಯೋ ಅಥವಾ ಕೊರೋನ ಹಬ್ಬಿಸುವ ಜಾತ್ರೆಯೋ': ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ

Update: 2022-01-09 17:25 GMT

ಬೆಂಗಳೂರು: ಮೃಕೆದಾಟು ಯೋಜನೆಯ ಜಾರಿಹೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ನಿಮ್ಮದು ಕೊರೋನ ಹಬ್ಬಿಸುವ ಜಾತ್ರೆಯೋ? ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ. ''ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜ್ವರದ ಲಕ್ಷಣದಿಂದ ಪಾದಯಾತ್ರೆಯಿಂದ ಹಿಂದೆ ಸರಿದಿದ್ದಾರೆ. ಇನ್ನೆಷ್ಟು ಜನರಿಗೆ ಕೋವಿಡ್ ಹಬ್ಬಿಸುವ ಯೋಜನೆ ಹಾಕಿಕೊಂಡಿದ್ದೀರಿ?'' ಎಂದು ಪ್ರಶ್ನಿಸಿದೆ. 

''ಕೋವಿಡ್ ಎಲ್ಲಿದೆ ಎಲ್ಲಿದೆ ಎಂದು ಕೇಳುತ್ತಿದ್ದ ಡಿಕೆಶಿ ಅವರೇ, ನಿಮ್ಮದೇ ಪಕ್ಷದ ಹಿರಿಯ ನಾಯಕರ ಪತ್ರಿಕಾ ಪ್ರಕಟಣೆ ನೋಡಿ. ಕೋವಿಡ್ ಇದೆ ಎಂದು ಮಾಜಿ‌ ಸಿಎಂ ವೀರಪ್ಪ ಮೊಯ್ಲಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿದ್ದಾರೆ. ನೀವು ಮಾತ್ರ ಹಠಹಿಡಿದು ಕೊರೋನಾ ಹಬ್ಬಿಸುತ್ತಿದ್ದೀರಿ'' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News