ಬೆಂಗಳೂರು: ಬೈಕ್, ಕಾರುಗಳ​ ಮೇಲೆ ಬಿದ್ದ ಟಿಪ್ಪರ್; ಆರು ಮಂದಿ ಸ್ಥಳದಲ್ಲೇ ಮೃತ್ಯು

Update: 2022-01-10 18:06 GMT

ಬೆಂಗಳೂರು: ಟಿಪ್ಪರ್ ವೊಂದು ಎರಡು ಕಾರು ಮತ್ತು ಒಂದು ಬೈಕ್​ ಮೇಲೆ ಉರುಳಿ ಬಿದ್ದಿದ್ದು, ಆರು ಮಂದಿ ಮೃತಪಟ್ಟಿದ್ದು,  ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. 

ಬೆಂಗಳೂರು - ಮೈಸೂರು ಹೆದ್ದಾರಿಯ ಕುಂಬಳಗೋಡು ಸಮೀಪ ಘಟನೆ ಸಂಭವಿಸಿದೆ. 

ಎರಡು ಕಾರುಗಳಲ್ಲಿ 10 ಮಂದಿ ಪ್ರಯಾಣಿಕರಿದ್ದು, ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.  ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್​ ಲಾರಿಯ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸದ್ಯ ಸ್ಥಳಕ್ಕೆ ಕುಂಬಳಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News