ಚಾಮರಾಜನಗರ: ಮತ್ತೆ 8 ಓಂ ಶಕ್ತಿ ಮಾಲಾಧಾರಿಗಳಿಗೆ ಕೋವಿಡ್ ದೃಢ

Update: 2022-01-12 04:32 GMT

ಚಾಮರಾಜನಗರ, ಜ.12: ಜಿಲ್ಲೆಯಿಂದ ಓಂ ಶಕ್ತಿಗೆ ಮಾಲಾಧಾರಿಗಳಾಗಿ ತೆರಳಿ ವಾಪಸ್ಸಾದವರ ಪೈಕಿ ಮತ್ತೆ ಎಂಟು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದು ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಹಂಗಳ ಗ್ರಾಮದಿಂದ 63 ಮಂದಿ ಓಂ ಶಕ್ತಿಗೆ ಬಸ್ಸಿನಲ್ಲಿ ತೆರಳಿದ್ದು, ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹಿಂದಿರುಗಿದ್ದರು. ಈ ಹಿನ್ನೆಲೆಯಲ್ಲಿ ಅವರೆಲ್ಲರನ್ನೂ ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಎಂಟು ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಉಳಿದವರ ಪರೀಕ್ಷಾ ಮಾದರಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಕಳುಹಿಸಲಾಗಿದ್ದು, ಗುರುವಾರ ವರದಿ ಬರಲಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News