ಮೇಕೆದಾಟು ಪಾದಯಾತ್ರೆ: 64 ಕಾಂಗ್ರೆಸ್ ಮುಖಂಡರ ವಿರುದ್ಧ 3ನೇ ಎಫ್.ಐ.ಆರ್. ದಾಖಲು

Update: 2022-01-12 06:15 GMT

ಬೆಂಗಳೂರು, ಜ.12: ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ಮಂಗಳವಾರ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ 3ನೇ ಎಫ್.ಐ.ಆರ್. ದಾಖಲಾಗಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಸಹಿತ ಒಟ್ಟು 64 ಮಂದಿ ವಿರುದ್ಧ ರಾಮನಗರದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಪಾದಯಾತ್ರೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕನ ವಿರುದ್ಧ ದಾಖಲಾದ ಮೂರನೇ ಎಫ್‌ಐಆರ್ ಇದಾಗಿದೆ.

'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯೊಂದಿಗೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಆರಂಭಿಸಿರುವ ಐತಿಹಾಸಿಕ ಪಾದಯಾತ್ರೆ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News