ಚನ್ನರಾಯಪಟ್ಟಣದಲ್ಲಿ ರಸ್ತೆ ಅಪಘಾತ: ವಿಟ್ಲ, ಈಶ್ವರಮಂಗಲದ ಯುವಕರಿಬ್ಬರು ಮೃತ್ಯು

Update: 2022-01-14 09:54 GMT
ಸುದರ್ಶನ್

ಪುತ್ತೂರು, ಜ.14: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪುತ್ತೂರು ತಾಲೂಕಿನ ಈಶ್ವರಮಂಗಲದ ಹಾಗೂ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ನಿವಾಸಿ ಯುವಕರಿಬ್ಬರು ಮೃತಪಟ್ಟಿರುವುದು ವರದಿಯಾಗಿದೆ.

ಮೃತರನ್ನು ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬಂಟಕಲ್ಲು ನಿವಾಸಿ ದೇವಿಪ್ರಸಾದ್ ಶೆಟ್ಟಿ(30) ಮತ್ತು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕೆಳಗಿನ ಬಾರೆಬೆಟ್ಟು ನಿವಾಸಿ ಸುದರ್ಶನ್(32) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಇನ್ಫೋಸಿಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು ಎಂದು ತಿಳಿದುಬಂದಿದೆ.

ದೇವಿ ಪ್ರಸಾದ್ ಮತ್ತು ಸುದರ್ಶನ್ ಬೆಂಗಳೂರಿನಿಂದ ಊರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಲಾರಿ ಮತ್ತು ಇವರು ಪ್ರಯಾಣಿಸುತ್ತಿದ್ದ ಕಾರು ನಡುವೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News