ಸಿಂದಗಿ: ಆಟೋ ಚಾಲಕನ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Update: 2022-01-14 13:25 GMT
ಸಿಂದಗಿ: ಆಟೋ ಚಾಲಕ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೂರ್ಅಹ್ಮದ್ ಬುಡ್ಡೆಸಾಬ್ ನಾಯಿಕ್, ಸಮೀರ್ ರಫೀಕ್ ನಾಯಿಕ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹಣಕಾಸಿನ ವಿಚಾರಕ್ಕೆ ತೌಫಿಕ್ ಮೆಹಬೂಬ್ ಚಿನಿವಾರ್ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಜೇವರ್ಗಿ ಬೈಪಾಸ್ ಬಳಿ ಹತ್ಯೆಗೈದಿದ್ದರು ಎನ್ನಲಾಗಿದೆ.
ಸಿಂದಗಿ ಪಿಎಸ್ಐ ನಿಂಗಪ್ಪ ಪೂಜಾರಿ ಹಾಗೂ ತಂಡ 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿ ದರ್ಗಾ ಜೈಲಿಗೆ ಕಳುಹಿಸಿಕೊಟ್ಟಿದ್ದಾರೆ.
ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.