ಪುತ್ತೂರು: ಕೆಎಸ್ಸಾರ್ಟಿಸಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ; ಆರೋಪಿಯ ಬಂಧನ

Update: 2022-01-14 13:34 GMT
ಸಾಂದರ್ಭಿಕ ಚಿತ್ರ

ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ಸು ಸಂಚಾರ ನಿಯಂತ್ರಣಾಧಿಕಾರಿಯೊಬ್ಬರ ಮೇಲೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆನ್ನಲಾದ ಘಟನೆ ಗುರುವಾರ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ನಡೆದಿದ್ದು, ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕಿನ ಸುರತ್ಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಕೆಎಸ್ಸಾರ್ಟಿಸಿ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಹಲ್ಲೆಗೊಳಗಾದವರು.

ಕಾಞಂಗಾಡ್‍ಗೆ ಹೋಗುವ ಕೇರಳದ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಆರೋಪಿಯು ಬಳಿಕ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಸುಬ್ರಹ್ಮಣ್ಯ ಭಟ್  ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಪುತ್ತೂರು ನಗರ ಪೊಲೀಸರು ತನಿಖೆ ಮುನ್ನಡೆಸುತ್ತಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News