ಭಟ್ಕಳ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಮೃತ್ಯು
Update: 2022-01-15 12:18 GMT
ಭಟ್ಕಳ: ತಾಲೂಕಿನ ಪ್ರವಾಸಿ ತಾಣ ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮುತ್ತು ನಿಂಗಪ್ಪ ಸೋನಾರ್ (32) ಎಂದು ಗುರುತಿಸಲಾಗಿದೆ.
ಹಾವೇರಿ ಜಿಲ್ಲೆಯ ಅಕ್ಕಿ ಆಲೂರಿನಿಂದ ಒಂಬತ್ತು ಜನರ ತಂಡವು ಪ್ರವಾಸಕ್ಕಾಗಿ ಶುಕ್ರವಾರ ಮುರ್ಡೇಶ್ವರಕ್ಕೆ ಆಗಮಿಸಿತ್ತು. ಮಧ್ಯಾಹ್ನ ಸುಮಾರು ಮೂರು ಗಂಟೆ ಸಮಯಕ್ಕೆ ಈಜಲು ಸಮುದ್ರಕ್ಕೆ ಇಳಿದಿದ್ದರು, ಈ ಸಂದರ್ಭದಲ್ಲಿ ಮುತ್ತು ಮುಳುಗಿದರು ಎನ್ನಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.