ವಿಜಯಪುರದಲ್ಲಿ ರೈತರಿಂದ ತರಕಾರಿ ರಸ್ತೆಗೆ ಚೆಲ್ಲಿ ಆಕ್ರೋಶ

Update: 2022-01-16 05:41 GMT

ವಿಜಯಪುರ, ಜ.16: ವೀಕೆಂಡ್ ಕರ್ಫ್ಯೂ ಕಾರಣಕ್ಕೆ ತರಕಾರಿ ಮಾರಾಟಕ್ಕೂ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯಪುರ ‌ನಗರದ ಗೋದಾವರಿ ಹೊಟೇಲ್ ಎದುರು ನಡೆದಿದೆ.

ತರಕಾರಿ ಮಾರಾಟಕ್ಕೆ ಪೊಲೀಸರು ಅಡ್ಡಿಪಡಿಸಿದ್ದರಿಂದ ರೊಚ್ಚಿಗೆದ್ದ ರೈತನೋರ್ವ ರಸ್ತೆ‌ ಮೇಲೆ ಸೊಪ್ಪು ತರಕಾರಿಗಳನ್ನು ಚೆಲ್ಲಿ ಪ್ರತಿಭಟನೆ ನಡೆಸಿದರು. ಸುರಕ್ಷಿತ ಅಂತರ ಕಾಯ್ದುಕೊಂಡು ತರಕಾರಿ ಮಾರಾಟ ಮಾಡುತ್ತಿದ್ದರೂ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ ನೂರಾರು ರೈತರು ನಡು ರಸ್ತೆಯಲ್ಲೇ ಜಮಾವಣೆಗೊಂಡಿದ್ದರು. ನಮಗೆ ತರಕಾರಿ ಮಾರಲು ಅವಕಾಶ ನೀಡಬೇಕು ಎಂದು ರೈತರು ಆಗ್ರಹಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ಜಿಲ್ಲಾಧಿಕಾರಿ ತರಕಾರಿ ಮಾರಾಟಗಾರರಿಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡುವುದಾಗಿ ಹೇಳಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News