ಕಲಬುರ್ಗಿ ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ಏಕೆ ನೇಮಿಸಿಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Update: 2022-01-16 14:15 GMT

ಬೆಂಗಳೂರು, ಜ. 16: `ನೀವು ಮುಖ್ಯಮಂತ್ರಿ ಆಗಿ ನಾಲ್ಕು ತಿಂಗಳಾಗಿದ್ದರೂ, ಕಲಬುರ್ಗಿ ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಏಕೆ?' ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, `ಬಸವರಾಜ ಬೊಮ್ಮಾಯಿ ಅವರೇ, ಕಲಬುರ್ಗಿಯಲ್ಲಿ ಕಾಮಗಾರಿಗಳು ವಿಳಂಬವಾಗಿವೆ. ಅನುದಾನ ಕೊರತೆಯಾಗಿದೆ. ಪಕ್ಷದ ಹೆಸರಲ್ಲಿ ಭ್ರಷ್ಟಾಚಾರ ಮತ್ತು ಪೊಲೀಸರಿಂದ ವಸೂಲಿ ಮಿತಿ ಮೀರಿದೆ. ಅಧಿಕಾರಿಗಳು ಕೈಗೆ ಸಿಗದಾಗಿದ್ದರೆ ಡ್ರಗ್ಸ್ ಮತ್ತು ಮದ್ಯ ನೀರಿನಂತೆ ಹರಿಯುತ್ತಿವೆ' ಎಂದು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News