ವಾರಾಂತ್ಯ ಕರ್ಫ್ಯೂ ನಡುವೆ ನಡೆದ ಜಗಳೂರು ಶಾಸಕರ ಹುಟ್ಟುಹಬ್ಬ ಆಚರಣೆಯಲ್ಲಿ ಪೊಲೀಸರು ಭಾಗಿ

Update: 2022-01-17 07:50 GMT

ದಾವಣಗೆರೆ: ಕೊರೋನ ನಿಯಂತ್ರಣಕ್ಕಾಗಿ ಸರಕಾರ ರಾಜ್ಯದಲ್ಲಿ ರಾತ್ರಿ ​ಕರ್ಫ್ಯೂ ಮತ್ತು ವಾರಾಂತ್ಯ​ ಕರ್ಫ್ಯೂ ಜಾರಿಗೊಳಿಸಿದ್ದರೂ ಜನಪ್ರತಿನಿಧಿಗಳೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಭೆ ಸಮಾರಂಭಗಳನ್ನು ನಡೆಸುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದೆ. 

ದಾವಣಗೆರೆಯ ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ವಿ. ರಾಮಚಂದ್ರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ರವಿವಾರ ತಮ್ಮ ಮನೆಯ ಮುಂದೆ  ಪೆಂಡಾಲ್ ಹಾಕಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಲ್ಲದೇ ಪೊಲೀಸ್ ಅಧಿಕಾರಿಗಳು ಕೂಡ ಭಾಗವಹಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಶಾಸಕರಿಗೆ ಪೊಲೀಸರು ಶುಭಹಾರೈಸುವುದು ವಿಡಿಯೋದಲ್ಲಿ ಕಾಣಿಸುತ್ತದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News