ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಕಾರ್ಯದರ್ಶಿಯಾಗಿ ಪ್ರಭಾಕರ ಆಚಾರ್ಯ

Update: 2022-01-17 12:29 GMT
ಪ್ರಭಾಕರ ಆಚಾರ್ಯ

ಉಡುಪಿ, ಜ.17: ರಾಜ್ಯ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಸ್ತುವಾರಿಯಾಗಿ ಪ್ರಭಾಕರ ಆಚಾರ್ಯ ಕಟಪಾಡಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆ ಮೇರೆಗೆ ರಾಜ್ಯ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ.ಆರ್. ನಾಯ್ಡು ನೇಮಕ ಮಾಡಿದ್ದಾರೆ.

ಕಟಪಾಡಿ ಗ್ರಾಪಂ ಸದಸ್ಯರಾಗಿರುವ ಇವರು, ಈ ಹಿಂದೆ ಕಾಪು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ, ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಐಟಿ ಸೆಲ್ ಸೋಶಿಯಲ್ ಮಿಡಿಯಾ ಉಪಾಧ್ಯಕ್ಷರಾಗಿ ಹಾಗೂ ಉಡುಪಿ ಜಿಲ್ಲಾ ಸಾಮಾಜಿಕ ಜಾಲ ತಾಣದ ಸಹ ಸಂಚಾಲಕರಾಗಿ ಮತ್ತು ಸಂಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News