ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನೀಡಲು ಸಿಪಿಐಎಂ ಒತ್ತಾಯ

Update: 2022-01-17 12:34 GMT

ಉಡುಪಿ, ಜ.17: ಗಣರಾಜ್ಯೋತ್ಸವದ ಪೆರೇಡ್ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರ ವನ್ನು ಕೇಂದ್ರ ಸರಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಶತಮಾನಗಳ ಹಿಂದೆಯೇ ಅಸ್ಪ್ರಶ್ಯತೆ ಮತ್ತಿತರ ಅನ್ಯಾಯಗಳ ವಿರುದ್ದ ಹಿಂದೂ ಧರ್ಮದ ಸುಧಾರಣೆಗಾಗಿ ತೊಡಗಿಸಿಕೊಂಡಿದ್ದ ನಾರಾಯಣ ಗುರುಗಳನ್ನು ಅಪಮಾನಿಸುವ ಕೇಂದ್ರದ ನಡೆ ಖಂಡನೀಯ. ಇದು ಆಡಳಿತದಲ್ಲಿ ಆರ್‌ಎಸ್‌ಎಸ್ ಚಿಂತನೆಗಳು ಮೇಲುಗೈ ಸಾಧಿಸಿರುವುದರ ಪರಿಣಾಮ. ಕೇಂದ್ರ ಸರಕಾರವು ತಕ್ಷಣ ಆಗಿರುವ ಪ್ರಮಾದವನ್ನು ಸರಿಪಡಿಸಿ ಕೇರಳ ಸರಕಾರ ಯೋಜಿಸಿದ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News