ಶ್ರೀ ನಾರಾಯಣಗುರು ಸ್ಥಬ್ಧ ಚಿತ್ರ ತಿರಸ್ಕರಿಸಿರುವುದು ನೋವಿನ ವಿಚಾರ: ದ.ಕ. ಜಿಲ್ಲಾ ಯುವ ಜನತಾದಳ

Update: 2022-01-18 08:43 GMT

ಮಂಗಳೂರು : ಜನವರಿ 26ರ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮರ್ಷಿ ನಾರಾಯಣಗುರುಗಳ ಸ್ಥಬ್ಧ ಚಿತ್ರವನ್ನು ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ಅತ್ಯಂತ ನೋವಿನ ವಿಚಾರವಾಗಿದೆ ಎಂದು ದ.ಕ. ಜಿಲ್ಲಾ ಯುವ ಜನತಾದಳ ತಿಳಿಸಿದೆ.

ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನಾ ಶ್ರೀ ನಾರಾಯಣ ಗುರುಗಳು, ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು, ಅಂತವರ ಮೂರ್ತಿ ಇದ್ದ ಸ್ಥಬ್ಧ ಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಆಜ್ಞಾನದ ಪರಮಾವಧಿ, ಆಯ್ಕೆ ಸಮಿತಿಯಲ್ಲಿ ಇಂತಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ.

ಇದು “ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದ್ದು” ಬ್ರಹ್ಮರ್ಷಿ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯ ಅಂಗೀಕಾರ ಮಾಡುವುದರ ಮುಖಾಂತರ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅವಕಾಶ ನೀಡಬೇಕು ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳಿಗೆ ಗೌರವವನ್ನು ನೀಡಬೇಕೆಂದು  ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರಾದ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ  ಜಿಲ್ಲಾಧಿಕಾರಿಯವರಿಗೆ  ಮನವಿ ಸಲ್ಲಿಸಿ  ಒತ್ತಾಯಿಸಲಾಯಿತು.

ಈ ವೇಳೆ ಯುವ ಜೆಡಿಎಸ್ ರಾಜ್ಯ ನಾಯಕರಾದ ಫೈಝಲ್‌ ರಹ್ಮಾನ್, ಜಿಲ್ಲಾ ನಾಯಕರುಗಳಾದ ಫೈಝಲ್‌ ಮೊಹಮ್ಮದ್‌, ಹಿತೇಶ ರೈ, ಸತ್ತಾರ್‌ ಬಂದರ್, ನಾಝೀರ್ ಕಂದಕ್‌, ರಾಶ್  ಬ್ಯಾರಿ, ಸುಮೀತ್‌ ಸುವರ್ಣ, ಕೌಶಕ್‌, ಜಿತೇಶ್‌, ರಿತೇಶ್‌, ರೋಹನ್‌, ಪ್ರದೀಪ್‌, ಮೊಹಮ್ಮದ್‌ ಬಿಲಾಲ್‌, ಆರೀಫ್‌, ಅಕ್ರಮ್‌  ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News