ಕೊಪ್ಪ: ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತ್ಯು

Update: 2022-01-18 06:06 GMT

ಕೊಪ್ಪ: ತಾಲೂಕಿನ ಹರಿಹರಪುರ ಸೇತುವೆ ಸಮೀಪದ ರಾಷ್ಟೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಅಗುಂಬೆಯಿಂದ ಕೊಪ್ಪಕ್ಕೆ ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ಉರುಳಿಬಿದ್ದು ಅವಘಡ ಸಂಭವಿಸಿದೆ.

ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರೆಂದು ತಿಳಿದು ಬಂದಿದ್ದು ಅಪಘಾತದಲ್ಲಿ ಕೊಪ್ಪದ ಗುಣವಂತೆ ಮೆಡಿಕಲ್‌ ಶಾಪ್ ನ ಮಾಲಕ ಗೋಳಿಕೊಪ್ಪ ಗ್ರಾಮದ ನಿವಾಸಿ ಜಿ.ಎಸ್.ರಾಜಶೇಖರ್‌ (50) ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದ ಮಣಿಕಂಠ ಎಂಬವರು ಮೃತಪಟ್ಟಿದ್ದಾರೆ.

ಕಾರಿನ ಚಾಲಕ ಹಾಗೂ ಇನ್ನೋರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಈ ಬಗ್ಗೆ ಹರಿಹರ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News