ಮಸೀದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ: ಕಾಳಿ ಮಠದ ಋಷಿಕುಮಾರ ಸ್ವಾಮಿ ಬಂಧನ

Update: 2022-01-18 08:43 GMT

ಚಿಕ್ಕಮಗಳೂರು: ಮಸೀದಿಯೊಂದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಕಾಳಿ ಮಠದ ಋಷಿಕುಮಾರ ಸ್ವಾಮಿಯನ್ನು ಶ್ರೀರಂಗಪಟ್ಟಣದ ಪೊಲೀಸರು ಬಂಧಿಸಿರುವ ಬಗ್ಗೆ ಮಂಗಳವಾರ ವರದಿಯಾಗಿದೆ.

ಶ್ರೀರಂಗಪಟ್ಟಣದಲ್ಲಿರುವ ಹಳೆಯ ಮಸೀದಿಯೊಂದರ ಬಳಿಗೆ ತೆರಳಿದ್ದ ಋಷಿಕುಮಾರ ಸ್ವಾಮಿ ಅಲ್ಲಿ ಮಸೀದಿಯ ವಿಡಿಯೋ ಚಿತ್ರೀಕರಿಸಿಕೊಂಡು ಅವಹೇಳನಕಾರಿಯಾಗಿ, ಕೋಮು ಸಾಮರಸ್ಯ ಹದಗೆಡಿಸುವ ವಿಡಿಯೋ ಮಾಡಿ ಅದನ್ನು ತನ್ನ ಪೇಸ್ಬುಕ್ ಖಾತೆ ಗೆ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ಥಳೀಯರೊಬ್ಬರು ನೀಡಿದ್ದ ದೂರಿನ ಮೆರೆಗೆ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಮಂಗಳವಾರ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವನೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿ ಋಷಿಕುಮಾರ ಸ್ವಾಮಿಯನ್ನು ಬಂಧಿಸಿದರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News