ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ವೈನ್ ಮರ್ಚಂಟ್ಸ್ ಆಗ್ರಹ

Update: 2022-01-18 15:01 GMT

ಉಡುಪಿ, ಜ.18: ವಾರಾಂತ್ಯ ಕರ್ಫ್ಯೂ ಆದೇಶದಿಂದ ರಾಜ್ಯದ ಮದ್ಯ ಮಾರಾಟ ಸನ್ನದುದಾರರಿಗೆ ಮತ್ತೆ ತುಂಬಾ ನಷ್ಟ ಉಂಟಾಗಿದೆ. ಆದುದರಿಂದ ವಾರಾಂತ್ಯದ ಕರ್ಫ್ಯೂ ಆದೇಶವನ್ನು ಕೂಡಲೇ ವಾಪಾಸ್ಸು ಪಡೆದುಕೊಳ್ಳಬೇಕು ಮತ್ತು ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಬೇಕು ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ ಆಗ್ರಹಿಸಿದ್ದಾರೆ.

ಇಲ್ಲದಿದ್ದರೆ ವಾರಾಂತ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂದರ್ಭ ಅವಕಾಶ ನೀಡಿದಂತೆ ಬೆಳಗ್ಗಿನ ಹೊತ್ತಲ್ಲಿ 8ಗಂಟೆಯಿಂದ ಮಧ್ಯಾಹ್ನ 2ಗಂಟೆಯ ವರೆಗೆ ಮದ್ಯ ಪಾರ್ಸೆಲ್ ನೀಡಲು ಅವಕಾಶ ನೀಡಬೇಕು ಎಂದು ಬಿ. ಗೋವಿಂದರಾಜ್ ಹೆಗ್ಡೆ ಪ್ರಕಟಣೆಯಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News