ಚಾಮರಾಜನಗರ: ಚಿಕ್ಕಹೊಳೆ ಜಲಾಶಯಕ್ಕಿಳಿದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು

Update: 2022-01-19 15:28 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಚಿಕ್ಕಹೊಳೆ ಜಲಾಶಯಕ್ಕಿಳಿದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಚಾಮರಾಜನಗರ ತಾಲೂಕಿನ ಚೆಂದುಕಟ್ಟೆಮೋಳೆ ಗ್ರಾಮದ ಕುಮಾರ್ ಎಂಬುವರ ಪುತ್ರಿ ಸೌಂದರ್ಯ(15) ಮೃತ ದುರ್ದೈವಿ. ಮೃತ ಸೌಂದರ್ಯ ತನ್ನ ಸ್ನೇಹಿತೆಯೊಟ್ಟಿಗೆ ಬುಧವಾರ ಜಲಾಶಯ ನೋಡಲು ತೆರಳಿದ್ದಳು. ಆ ವೇಳೆ, ಈಜಲು ಬಾರದಿದ್ದರೂ ನೀರಿಗೆ ಇಳಿದಿದ್ದರಿಂದ ಈ ಅವಘಡ ಉಂಟಾಗಿದೆ ಎಂದು ಜೊತೆಗೆ ತೆರಳಿದ್ದ ಸ್ನೇಹಿತೆ ತಿಳಿಸಿದ್ದಾಳೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News