ಕೈದಿಗಳ ಅಸ್ವಾಭಾವಿಕ ಸಾವು: ಪರಿಹಾರದ ವರದಿ ಕೇಳಿದ ಹೈಕೋರ್ಟ್
Update: 2022-01-20 16:00 GMT
ಬೆಂಗಳೂರು, ಜ.20: ರಾಜ್ಯದ ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಪರಿಹಾರ ನೀಡುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರುತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಬಗ್ಗೆ ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಮುಂದೂಡಿತು.